Kagga Logo

Inanimate, animate

109

113

109

ಶಿಲೆಯಾಗಿ ನಿದ್ರಿಸುತ್ತಿರ್ದಾಕೆ ರಾಮಪದ ।
ತಲದ ಸಂಸ್ಪರ್ಶದಿಂದೆದ್ದು ನಿಂತಂತೆ ॥
ಚಲಿಸದೆನಿಸಿದ ಜಡವನಾವ ಗಾಳಿಯೊ ಸೋಕೆ ।
ಬಲ ತೀವಿ ಚಲಿಪುದದು - ಮಂಕುತಿಮ್ಮ ॥ ೧೦೯ ॥

ಶಾಪಗ್ರಸ್ತಳಾಗಿ, ಕಲ್ಲಾಗಿ ನಿದ್ರಿಸುತ್ತಿದ್ದ ಋಷಿಯ ಪತ್ನಿ ಅಹಲ್ಯೆ, ರಾಮನ ಪದ ಸೋಕಿ ಜೀವಂತವಾದಂತೆ, ಇದು ಚಲಿಸದು, ಇದು ಜಡ ಎಂದು ಯಾವುದು ಕರೆಯಲ್ಪಡುತ್ತದೋ ಅದು ಸತ್ವದ, ಚೈತನ್ಯದ, ಜೀವ ಶಕ್ತಿಯ ಸಂಸರ್ಗದಿಂದ, ಶಕ್ತಿಯನ್ನು ಪಡೆದು ಜೀವಂತವಾಗುತ್ತದೆ ಎಂದು ಪ್ರಸ್ತಾಪಮಾಡುತ್ತಾರೆ ಮಾನ್ಯ ಗುಂಡಪ್ಪನವರು ಈ ಕಗ್ಗದಲ್ಲಿ.

Ahalya had turned into stone due to a curse from her husband Gautama. She stayed as a stone unmoved till Rama touched it with his foot. She came back to life. We may think many such objects as lifeless just because it does not move. Such objects can come to life and move when some wind blows energy into it. - Mankutimma.

110

ಹಿಮಗಿರಿಯ ಕಂಡಂಗೆ ಕ್ರಿಮಿಯ ಹಿರಿಮೆಯದೇನು? ।
ಕ್ರಿಮಿಗೆ ಹಸಿವುಂಟಿನಿತು ಬೆದಕಾಟವುಂಟು ॥
ಅಮಿತ ಸಂತತಿಯುಂಟು ಹಿಮಗಿರಿಯ ಸಮಯುಗದ ।
ಕ್ರಿಮಿಪಂಕ್ತಿ ಕಿರಿದಹುದೆ? - ಮಂಕುತಿಮ್ಮ ॥ ೧೧೦ ॥

ಹಿಮಾಲಯ ಪರ್ವತವನ್ನು ಕಂಡವನಿಗೆ ಒಂದು ಸಣ್ಣ ಕ್ರಿಮಿ ಯಾವ ಲೆಕ್ಕ? ಆದರೆ ಕ್ರಿಮಿಗೆ ಸಂತತಿ ಉಂಟು, ಹಸಿವುಂಟು, ಬೆದಕಾಟವುಂಟು. ಹಿಮಾಲಯವು ಎಂದಿನಿಂದ ಇದೆಯೋ ಅಂದಿನಿಂದ ಕ್ರಿಮಿಯ ಅನಂತ ಸಂತತಿಯೂ ಉಂಟು. ಕ್ರಿಮಿಗಳು ಎಷ್ಟಿವೆಯೆಂದರೆ ಕ್ರಿಮಿ ಸಂತತಿಯನ್ನು ಒಟ್ಟು ಮಾಡಿದರೆ , ಅದು ಹಿಮಾಲಯಕ್ಕಿಂತ ದೊಡ್ಡದಾಗಬಹುದು. ಹಾಗಾಗಿ ಕ್ರಿಮಿ ಪಂಕ್ತಿ ಕಿರಿಯದಲ್ಲವೆಂದು ಪ್ರಸ್ತಾಪ ಮಾಡುತ್ತಾರೆ ಮಾನ್ಯ ಗುಂಡಪ್ಪನವರು ಈ ಕಗ್ಗದಲ್ಲಿ.

If a person has seen the snow capped mountains, what greatness will he see in a mere bacteria? The bacteria though, has life, hunger and urge to go places in search of food. It has (the cumulative intelligence of) infinite lineage of bacteria that came before it; perhaps the as old as the mighty mountains. Is this legacy of bacteria any smaller than that of the mountain? - Mankutimma.

111

ಜಡವೆಂಬುದೇನು? ಸೃಷ್ಟಿಯಲಿ ಚೇತನ ಸುಪ್ತಿ ।
ಅಡಗಿ ನಿದ್ರಿಪುದಲ್ಲಿ ಚೈತನ್ಯದಗ್ನಿ ॥
ಮಿಡಿಯೆ ಪರಸತ್ತ್ವ ವಿದ್ಯುದ್ದೀಪ್ತಿಯದನಾಗ ।
ನೆಡೆವುದದು ಜೀವಿವೊಲು - ಮಂಕುತಿಮ್ಮ ॥ ೧೧೧ ॥

ಒಂದೇ ಮೂಲದಿಂದ ಹೊರಟ ಎರಡು ವಸ್ತುಗಳು. ಒಂದು ಜಡ ಇನ್ನೊಂದು ಚೇತನ. ಅದರ ಅಸ್ಥಿತ್ವಕ್ಕೆ ಕಾರಣವೇ ಬೃಹಚ್ಚೇತನ. ಸೃಷ್ಟಿಯ ಆದಿಯಲ್ಲಿ ಆ ಚೇತನದ ವ್ಯಾಪಕತೆಯ ಸ್ವರೂಪವೇ ಬೇರೆ. ಕೋಟ್ಯಾಂತರ ವರ್ಷಗಳಿಂದ ಬದಲಾಗುತ್ತಾ ಬರುತ್ತಿದೆ. ಮೊದಲು ಪಂಚಭೂತಗಳಲ್ಲಿ ಮಾತ್ರ ಇದ್ದದ್ದು ಕಾಲಾನುಕಾಲಕ್ಕೆ ಗಿಡಮರಗಳಲ್ಲಿ ತದನಂತರ ಕ್ರಿಮಿ ಕೀಟಗಳಲ್ಲಿ, ನಂತರ ಪ್ರಾಣಿಗಳಲ್ಲಿ ಹೀಗೆ ಎಲ್ಲದರ ಅಸ್ಥಿತ್ವಕ್ಕೆ ಕಾರಣವಾದ ಚೇತನವು ತನ್ನ ಶರೀರವನ್ನು ರೂಪಾಂತರಗೊಳಿಸುತ್ತಾ ಹೋಯಿತು. ” ಅಕಾಶಾದ್ವಾಯು: ವಾಯೋರಗ್ನಿ: ಅಗ್ನೇರಾಪಃ ಅದ್ಭ್ಯಃ ಪೃಥಿವೀ ಪೃತಿವ್ಯಾ ಓಷದಯಃ ಒಷದೀಭ್ಯೋನ್ನಂ ಅನ್ನಾತ್ ಪುರುಷಃ ” ಹೀಗೆ ಚೇತನವು ತನ್ನ ಇರುವಿಕೆಯನ್ನು ಎಲ್ಲೆಡೆ ತೋರಿಸುತ್ತಾ ಜೀವಗಳಲ್ಲಿ ಚೇತನ ಸ್ವರೂಪದಿಂದ ” ಪುರುಷ” ನೆಂದು ಕರೆಯಲ್ಪಡುತ್ತಾ ಪೌರುಷದಿಂದ ಮೆರೆದಿದೆ.ಈ ಹಿಂದಿನ ಕಗ್ಗದಲ್ಲಿ ಉಲ್ಲೇಖಿಸಿದಂತೆ “ಜಡ” ವೆಂದರೆ ಚಲನೆ ಇಲ್ಲದ ವಸ್ತು. ಅದರಲ್ಲಿಯೂ ಚೈತನ್ಯವಿದೆ. ಆದರೆ ಆ ಚೈತನ್ಯಾಗ್ನಿ ನಿದ್ರಿಸುತ್ತಿದೆ ಎಂದರೆ ಸುಪ್ತವಾಗಿದೆ. ನಿದ್ರಿಸುತ್ತಿರುವ ಆ ಅಗ್ನಿಯ ಕಿಡಿ ಸಿಡಿದು ಮಿಡುಕಿದರೆ ಅದು ಜೀವಿಯಾಗುತ್ತದೆ ಎನ್ನುತ್ತಾರೆ ಮಾನ್ಯ ಗುಂಡಪ್ಪನವರು ಈ ಕಗ್ಗದಲ್ಲಿ.

What is an inanimate object? It is just another part of creation where life is asleep. The fire of life is asleep inside them. When the supreme cosmic being blows electrifying energy into it, it starts walking (moving) like a living being. - Mankutimma. [Translator's note: Is he trying to explain the the origin of life - http://en.wikipedia.org/wiki/Abiogenesis ]

112

ಹಿಮಗಿರಿಯೊಳವಿತಿಹುದು ಚೈತನ್ಯದಗ್ನಿಕಣ ।
ಸ್ತಿಮಿತದಿಂ ನಿಂತಿರ್ಪುದದು ಧರೆಯ ಹಿತಕೆ ॥
ಶಮದ ಸುಂದರದ ಸಾತ್ತ್ವಿಕದ ಗಾಂಭೀರ್ಯವದು ।
ನಮಗೊಂದು ವೇದನಿಧಿ - ಮಂಕುತಿಮ್ಮ ॥ ೧೧೨ ॥

ಬೃಹತ್ತಾದ ಹಿಮಾಲಯ ಪರ್ವತದ ಗರ್ಭದಲ್ಲೂ ಸಹ ಒಂದು ಚೈತನ್ಯದ ಅಗ್ನಿ ಅಡಗಿದೆ. ಅದು ಸ್ಥಿರವಾಗಿ, ಸ್ಥಿಮಿತದಿಂದ, ನಿಂತಿದೆ. ಈ ಭೂಮಿಯನ್ನು ಕಾಪಾಡುವುದಕ್ಕಾಗಿಯೇ!! ಶಾಂತ, ಸುಂದರ ಮತ್ತು ಸಾತ್ವಿಕ ಗಾಂಭೀರ್ಯದ ನಿಲುವಿನಲ್ಲಿ ನಿಂತಿರುವ ಆ ಹಿಮಾಲಯವು ನಮಗೆ ಜ್ಞಾನದ ಪ್ರತೀಕವಾಗಿದೆ ಎನ್ನುತ್ತಾರೆ ಮಾನ್ಯ ಗುಂಡಪ್ಪನವರು ಈ ಕಗ್ಗದಲ್ಲಿ.

Even inside the inanimate snow capped mountains, hides a spark of energy. It is contained and calm for the good of the earth (not everything is this world should be living - for its own good). That is the beauty of tranquillity, purity, profundity and composure. It is a source of inspiration and knowledge. - Mankutimma.

113

ಅಣುಸಂಖ್ಯೆಯೆಣಿಸುವನು ವಿಶ್ವದಲಿ ವಿಜ್ಞಾನಿ ।
ಗುಣಿಸುವನು ಭೂತಶಕ್ತಿಗಳನದರಿಂದೇಂ? ॥
ಗಣಿತಸಾಧ್ಯದ ಹಿಂದಗಣ್ಯದ ಮಹತ್ತತ್ತ್ವ ।
ವಣಗಿಹುದು ಮೂಲವದು - ಮಂಕುತಿಮ್ಮ ॥ ೧೧೩ ॥

ಈ ಜಗತ್ತಿನ ಅತಿ ಸೂಕ್ಷ್ಮ ಜೀವಿ ಅಣುಗಳನ್ನು ವಿಜ್ಞಾನಿ ಲೆಕ್ಕ ಹಾಕಿಬಿಡಬಹುದು. ಭೌತಿಕ ಶಕ್ತಿಯನ್ನು ಗುಣಿಸಿ ಭಾಗಿಸಿ ಲೆಕ್ಕಹಾಕಿಬಿಡಬಹುದು. ಆದರೆ ಅದರಿಂದ ಏನು ಪ್ರಯೋಜನ. ಕೇವಲ ಭೌತಿಕ ರೂಪವಷ್ಟೇ ತಿಳಿಯುವುದು. ಈ ಗಣಿತ ಶಾಸ್ತ್ರಕ್ಕೂ ಮೀರಿ ಒಂದು ಮಹತತ್ವವು ಭೌತಿಕ ಶರೀರದೊಳಗೆ ಚೈತನ್ಯ ರೂಪದಲಿ ಅಡಗಿದೆ. ಅದೇ ಮೂಲ ಎಂದು ಪ್ರಸ್ತಾಪಮಾಡುತ್ತಾರೆ ಮಾನ್ಯ ಗುಂಡಪ್ಪನವರು ಈ ಕಗ್ಗದಲ್ಲಿ.

A scientist can count the atoms in this world. But by knowing that can he know about the spirit of life in beings? Behind every facet of an object that can be measured, there is the greatness of the cosmic sprit that can not be measured or counted. That is the root of the object's existence. - Mankutimma.